Jaya Karnataka Janapara Vedike

Jaya Karnataka Janapara Vedike JKJV Jaya Karnataka Janapara Vedike (JKJV) is a nonprofit organization that aims at improving the quality of life for the people of Karnataka.

A truly democratic, non-political organization that has originated in response to the ever increasing problems of the people of this state. The list of woes is endless, such as, disparities in our society, the widening gap between the rich and the poor, corruption and inefficiency in our political system, an administrative system that has ignored the cries of the common man, the farmers, the students, homeless labourers, deprivation of women's rights, commercialisation of education and medical sector, food adulteration, the list is endless. The solution is when every single person in the government machinery is held accountable. JKJV aims to be a transparent bridge between the government and the common man. We also strongly believe in the principle, "Of the People, By the People, For the People" and aim at empowering the common man to fight for his rights, to say NO to corruption, NO to exploitation, to demand and get what rightfully belongs to him. Jaya Karnataka Janapara Vedike
Head Office Address:
# 912, 9th floor, Barton Center, M.G.Road, Bengaluru - 560 001. Contact: +91 9900044299
Email: jayakarnatakajanaparavedike@gmail.com, jayakarnatakajv@gmail.com

ಸ್ಲಂ ಪ್ರದೇಶದಲ್ಲಿ ವಾಸಿಸುತ್ತಿರುವ ಮಕ್ಕಳನ್ನು ಗುರುತಿಸಿ ಪಲ್ಸ್ ಪೋಲಿಯೊ ಲಸಿಕೆಯನ್ನು ಹಾಕಿಸಿದ ಜಯಕರ್ನಾಟಕ ಜನಪರ ವೇದಿಕೆ.ಆತ್ಮೀಯರೆ,ಜಯಕರ್ನಾ...
23/12/2025

ಸ್ಲಂ ಪ್ರದೇಶದಲ್ಲಿ ವಾಸಿಸುತ್ತಿರುವ ಮಕ್ಕಳನ್ನು ಗುರುತಿಸಿ ಪಲ್ಸ್ ಪೋಲಿಯೊ ಲಸಿಕೆಯನ್ನು ಹಾಕಿಸಿದ ಜಯಕರ್ನಾಟಕ ಜನಪರ ವೇದಿಕೆ.

ಆತ್ಮೀಯರೆ,

ಜಯಕರ್ನಾಟಕ ಜನಪರ ವೇದಿಕೆಯ ಬೆಂಗಳೂರು ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರಾದ ಶ್ರೀಮತಿ ಸುನಂದಾ ರೆಡ್ಡಿ ಅವರ ನೇತೃತ್ವದಲ್ಲಿ ಬೆಂಗಳೂರು ದಕ್ಷಿಣ ತಾಲ್ಲೂಕಿನ ಜಿಗಣಿ ಸುತ್ತಮುತ್ತಲಿರುವ ಸ್ಲಂ ಪ್ರದೇಶದಲ್ಲಿ ವಾಸಿಸುತ್ತಿರುವ ಮಕ್ಕಳು ಪೊಲಿಯೋ ಲಸಿಕೆಯಿಂದ ವಂಚಿತರಾಗಬಾರದೆಂದ ಉದ್ದೇಶದಿಂದ ಸ್ಲಂ ಪ್ರದೇಶದಲ್ಲಿ ವಾಸ ಮಾಡುತ್ತಿರುವ ಮಕ್ಕಳನ್ನು ಗುರುತಿಸಿ ಆರೋಗ್ಯ ಅಧಿಕಾರಿಗಳನ್ನು ಕರೆದಂತು ಪೊಲಿಯೋ
ಲಸಿಕೆಯನ್ನು ಹಾಕಿಸಲಾಯಿತು.

ಈ ವೇಳೆ ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಜಯಕರ್ನಾಟಕ ಜನಪರ ವೇದಿಕೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇಂತಿ:
ಜಯಕರ್ನಾಟಕ
ಜನಪರ ವೇದಿಕೆ.

ಥೈಲ್ಯಾಂಡ್ ದೇಶದಲ್ಲಿ ನಡೆದ ಪಂಜ ಕುಸ್ತಿಯಲ್ಲಿ ಪದಕ ಪಡೆದ ಗೌರಮ್ಮ ಅವರಿಗೆ ಶಿವಮೊಗ್ಗ ಜಿಲ್ಲಾ ಶಿಕಾರಿಪುರ ತಾಲ್ಲೂಕು ಘಟಕದ ವತಿಯಿಂದ ಗೌರವ ಸಮರ್...
05/12/2025

ಥೈಲ್ಯಾಂಡ್ ದೇಶದಲ್ಲಿ ನಡೆದ ಪಂಜ ಕುಸ್ತಿಯಲ್ಲಿ ಪದಕ ಪಡೆದ ಗೌರಮ್ಮ ಅವರಿಗೆ ಶಿವಮೊಗ್ಗ ಜಿಲ್ಲಾ ಶಿಕಾರಿಪುರ ತಾಲ್ಲೂಕು ಘಟಕದ ವತಿಯಿಂದ ಗೌರವ ಸಮರ್ಪಣೆ

ಆತ್ಮೀಯರೆ,

ಜಯಕರ್ನಾಟಕ ಜನಪರ ವೇದಿಕೆಯ ರಾಜ್ಯಾಧ್ಯಕ್ಷರಾದ ಶ್ರೀ ಜೆ.ಶ್ರೀನಿವಾಸ್ ಅವರ ಮಾರ್ಗದರ್ಶನದಲ್ಲಿ, ರಾಜ್ಯ ಕಾರ್ಯಾಧ್ಯಕ್ಷರಾದ ಶ್ರೀ ಹೆಚ್. ರಾಮಚಂದ್ರಯ್ಯ ಅವರ ಸಲಹೆಯೊಂದಿಗೆ,

ಇತ್ತೀಚೆಗೆ ಥೈಲ್ಯಾಂಡ್ ದೇಶದಲ್ಲಿ ಯುನೈಟೆಡ್ ವಲ್ಡ್ ಸ್ಪೋರ್ಟ್ಸ್ ಫಿಟ್ನೆಸ್ ಆವೃತ್ತಿಯು ಆಯೋಜಿಸಿದ್ದ ಪಂಜ ಕುಸ್ತಿಯಲ್ಲಿ 80ಕೆಜಿ ವಿಭಾಗದಲ್ಲಿ ಸ್ಪರ್ಧಿಸಿ ಪದಕವನ್ನು ಗೆಲ್ಲುವ ಮೂಲಕ ದೇಶಕ್ಕೆ, ರಾಜ್ಯಕ್ಕೆ, ಜಿಲ್ಲೆಗೆ, ತಾಲ್ಲೂಕಿಗೆ ಹಾಗೂ ಗ್ರಾಮಕ್ಕೆ ಕೀರ್ತಿ ತಂದ ಶಿವಮೊಗ್ಗ ಜಿಲ್ಲೆಯ, ಶಿಕಾರಿಪುರ ತಾಲೂಕಿನ ಅಂಬರಕೊಪ್ಪ ಗ್ರಾಮದ ವಿಶೇಷ ಚೇತನ ಗೌರಮ್ಮ ಅವರನ್ನು ನಮ್ಮ ಜಯಕರ್ನಾಟಕ ಜನಪರ ವೇದಿಕೆಯ ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಹುಲಗಿ ಕೃಷ್ಣಮೂರ್ತಿ ಅವರ ನೇತೃತ್ವದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಶಿಕಾರಿಪುರ ತಾಲ್ಲೂಕು ಅಧ್ಯಕ್ಷ ಶಿವಯ್ಯ.ಎನ್. ಶಾಸ್ತ್ರಿ, ಗೋಣಿ ಸಂದೀಪ್, ಪ್ರವೀಣ್, ವೈಭವ್, ಯುವರಾಜ್, ಚಂದ್ರಕಾಂತ್, ಕುಮಾರಸ್ವಾಮಿ, ವೆಂಕಟೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇಂತಿ:
ಜಯಕರ್ನಾಟಕ
ಜನಪರ ವೇದಿಕೆ.

ಮೆಕ್ಕೆಜೋಳ ಬೆಳೆಗೆ ಬೆಂಬಲ ಬೆಲೆ ಹಾಗೂ ಬೆಳೆ ಪರಿಹಾರ ನಿಗದಿಪಡಿಸುವಂತೆ ಆಗ್ರಹಿಸಿ ನಡೆಸಿದ ರೈತರ ಹೋರಾಟಕ್ಕೆ  ಜಯಕರ್ನಾಟಕ ಜನಪರ ವೇದಿಕೆಯ ಗದಗ ಜ...
05/12/2025

ಮೆಕ್ಕೆಜೋಳ ಬೆಳೆಗೆ ಬೆಂಬಲ ಬೆಲೆ ಹಾಗೂ ಬೆಳೆ ಪರಿಹಾರ ನಿಗದಿಪಡಿಸುವಂತೆ ಆಗ್ರಹಿಸಿ ನಡೆಸಿದ ರೈತರ ಹೋರಾಟಕ್ಕೆ ಜಯಕರ್ನಾಟಕ ಜನಪರ ವೇದಿಕೆಯ ಗದಗ ಜಿಲ್ಲಾ ಘಟಕ ಬೆಂಬಲ

ಆತ್ಮೀಯರೆ,

ಜಯಕರ್ನಾಟಕ ಜನಪರ ವೇದಿಕೆಯ ರಾಜ್ಯಾಧ್ಯಕ್ಷರಾದ ಶ್ರೀ ಜೆ.ಶ್ರೀನಿವಾಸ್ ಅವರ ಮಾರ್ಗದರ್ಶನದಲ್ಲಿ, ರಾಜ್ಯ ಕಾರ್ಯಾಧ್ಯಕ್ಷರಾದ ಶ್ರೀ ಹೆಚ್. ರಾಮಚಂದ್ರಯ್ಯ ಅವರ ಸಲಹೆಯೊಂದಿಗೆ, ರಾಜ್ಯ ಉಪಾಧ್ಯಕ್ಷರಾದ ಶ್ರೀ ಹಾಲಪ್ಪ ವರವಿ ಅವರ ನೇತೃತ್ವದಲ್ಲಿ,

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲ್ಲೂಕಿನಾದ್ಯಂತ ರೈತರು ಬೆಳೆದ ಮೆಕ್ಕೆಜೋಳ ಬೆಳೆಗಳನ್ನು ಖರೀದಿಸಲು ಖರೀದಿ ಕೇಂದ್ರ ಆರಂಭ ಮತ್ತು ಬೆಂಬಲ ಬೆಲೆಯನ್ನು ನಿಗದಿಪಡಿಸಿ ರೈತರು ಬೆಳೆದ ಬೆಳೆಗಳಿಗೆ ಸೂಕ್ತ ಪರಿಹಾರ ನಿಗದಿಪಡಿಸುವಂತೆ ಒತ್ತಾಯಿಸಿ ರೈತರು ಕರೆ ನೀಡಿದ ಲಕ್ಷ್ಮೇಶ್ವರ ಬಂದ್ ನಲ್ಲಿ ಪಾಲ್ಗೊಂಡು ರೈತರ ಹೋರಾಟಕ್ಕೆ ಬೆಂಬಲ ನೀಡಲಾಯಿತು.

ಈ ಸಂದರ್ಭದಲ್ಲಿ ಗದಗ ಜಿಲ್ಲಾ ಅಧ್ಯಕ್ಷರಾದ ಸಣ್ಣಯಲ್ಲಪ್ಪ ವಳಗೇರಿ, ಗೌರವಾಧ್ಯಕ್ಷ ಸದಾನಂದ ನಂದಣ್ಣವರ, ಕುಮಾರ್ ಬೆಟ್ಟಗೇರಿ, ಸಂತೋಷ್ ರಾಠೋಡ, ಮಾಲತೇಶ್ ರಗಟಿ, ನಿಂಗಪ್ಪ, ಸಂತೋಷ್, ಕೊಟ್ರಯ್ಯ, ಶರೀಪ್, ಮೊಹಮದ್ ಅಲಿ, ಗೋಪಾಲ, ಲಕ್ಷ್ಮಣ, ನಾಗರಾಜ್, ವೆಂಕಟೇಶ್, ಮನೋಜ್, ಶರಣಪ್ಪ, ಬಸು, ಮಾಲತೇಶಪ್ಪ, ಅಪ್ಪಣ್ಣ, ಕೆಂಚಪ್ಪ, ನಾಗಪ್ಪ, ಈಶ್ವರ, ಇಮಾಮ, ತಿಪ್ಪಣ್ಣ, ಮಹಂತೇಶ, ಹನುಮಂತ, ಸಿದ್ದಪ್ಪ, ಬಸಪ್ಪ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಇಂತಿ:
ಜಯಕರ್ನಾಟಕ
ಜನಪರ ವೇದಿಕೆ.

ಆತ್ಮೀಯರೆ,ರಾಷ್ಟ್ರೀಯ ಬಸವತತ್ತ್ವ ಪರಿಷತ್ ಹಾಗೂ ಅಥಣಿಯ ಗಚ್ಚಿನಮಠದ ಸಂಯುಕ್ತಾಶ್ರಯದಲ್ಲಿ ನವೆಂಬರ್ 14ರಿಂದ 16ರವರೆಗೆ ಬೆಂಗಳೂರಿನ ಹಂಪಿನಗರ ಕ್ರ...
10/11/2025

ಆತ್ಮೀಯರೆ,

ರಾಷ್ಟ್ರೀಯ ಬಸವತತ್ತ್ವ ಪರಿಷತ್ ಹಾಗೂ ಅಥಣಿಯ ಗಚ್ಚಿನಮಠದ ಸಂಯುಕ್ತಾಶ್ರಯದಲ್ಲಿ ನವೆಂಬರ್ 14ರಿಂದ 16ರವರೆಗೆ ಬೆಂಗಳೂರಿನ ಹಂಪಿನಗರ ಕ್ರೀಡಾಂಗಣದಲ್ಲಿ‌ ಆಯೋಜಿಸಿರುವ ಬಸವೋತ್ಸವ ಕಾರ್ಯಕ್ರಮದ ನಿಮಿತ್ತ ಶ್ರೀ ಬಸವಮಹಾಲಿಂಗ ಮಹಾಸ್ವಾಮೀಜಿಗಳ ನೇತೃತ್ವದಲ್ಲಿ ವಿವಿಧ ಮಠಾಧೀಶರು ಜಯಕರ್ನಾಟಕ ಜನಪರ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ನಮ್ಮೆಲ್ಲರ ಹೆಮ್ಮೆಯ ಶ್ರೀಯುತ ಬಿ.ಗುಣರಂಜನ್ ಶೆಟ್ಟಿ ಅವರನ್ನು ಭೇಟಿ ಮಾಡಿ ಕಾರ್ಯಕ್ರಮಕ್ಕೆ ಆಹ್ವಾನಿಸಿದರು.

ಈ ವೇಳೆ ಜಯಕರ್ನಾಟಕ ಜನಪರ ವೇದಿಕೆಯ ರಾಜ್ಯಾಧ್ಯಕ್ಷರಾದ ಜೆ.ಶ್ರೀನಿವಾಸ್ ರವರು, ರಾಜ್ಯ ಕಾರ್ಯಾಧ್ಯಕ್ಷರಾದ ಹೆಚ್.ರಾಮಚಂದ್ರಯ್ಯ ರವರು, ಮಹಿಳಾ ಘಟಕದ ರಾಜ್ಯ ಅಧ್ಯಕ್ಷರಾದ ಜಿ.ಎಸ್.ಪುಷ್ಪಲತಾ ರವರು, ಐಕೇರ್ ಬ್ರಿಗೇಡ್ ಸಂಸ್ಥೆಯ ಪ್ರಸಾದ್ ಶೆಟ್ಟಿರವರು ಹಾಗೂ ರಾಜ್ಯ ಸಂಘಟನಾ ಕಾರ್ಯದರ್ಶಿಯಾದ ಗೋಪಿರವರು, ಮಹಿಳಾ ಪದಾಧಿಕಾರಿಗಳಾದ ಪವಿತ್ರ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇಂತಿ ನಿಮ್ಮ:
ಜಯಕರ್ನಾಟಕ
ಜನಪರ ವೇದಿಕೆ.

ನಮ್ಮ ಜಯಕರ್ನಾಟಕ ಜನಪರ ವೇದಿಕೆಯ  ಸಂಸ್ಥಾಪಕ ಅಧ್ಯಕ್ಷರಾದ ಶ್ರೀ. ಬಿ.ಗುಣರಂಜನ್ ಶೆಟ್ಟಿಯವರ ಸಹೋದರಿ, ದಕ್ಷಿಣ ಭಾರತ ಚಿತ್ರರಂಗದ ಹೆಸರಾಂತ ನಾಯಕನ...
07/11/2025

ನಮ್ಮ ಜಯಕರ್ನಾಟಕ ಜನಪರ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ. ಬಿ.ಗುಣರಂಜನ್ ಶೆಟ್ಟಿಯವರ ಸಹೋದರಿ, ದಕ್ಷಿಣ ಭಾರತ ಚಿತ್ರರಂಗದ ಹೆಸರಾಂತ ನಾಯಕನಟಿ, ಅರುಂಧತಿ, ಬಾಹುಬಲಿ, ಘಾಟಿ ಖ್ಯಾತಿಯ ಅನುಷ್ಕಾ ಶೆಟ್ಟಿ (ಸ್ವೀಟಿ) ಅವರಿಗೆ ಜನ್ಮದಿನದ ಶುಭಾಶಯಗಳು.

ಶುಭ ಕೋರುವವರು:
ಪದಾಧಿಕಾರಿಗಳು, ಮುಖಂಡರು ಹಾಗೂ ಸರ್ವ ಸದಸ್ಯರು,
ಜಯಕರ್ನಾಟಕ
ಜನಪರ ವೇದಿಕೆ.

ಇಂತಿ ನಿಮ್ಮ:
ಜಯಕರ್ನಾಟಕ
ಜನಪರ ವೇದಿಕೆ.

https://youtu.be/fhECRhOYPBMಆತ್ಮೀಯರೆ,ನಮ್ಮ ಜಯಕರ್ನಾಟಕ ಜನಪರ ವೇದಿಕೆಯ  ಯೂಟ್ಯೂಬ್ ಚಾನೆಲ್ ನಲ್ಲಿ 70ನೇ ಕನ್ನಡ ರಾಜ್ಯೋತ್ಸವ ಹಾಗೂ 5ನೇ ವ...
06/11/2025

https://youtu.be/fhECRhOYPBM

ಆತ್ಮೀಯರೆ,

ನಮ್ಮ ಜಯಕರ್ನಾಟಕ ಜನಪರ ವೇದಿಕೆಯ ಯೂಟ್ಯೂಬ್ ಚಾನೆಲ್ ನಲ್ಲಿ 70ನೇ ಕನ್ನಡ ರಾಜ್ಯೋತ್ಸವ ಹಾಗೂ 5ನೇ ವಾರ್ಷಿಕೋತ್ಸವದ ವೀಡಿಯೋ ತುಣುಕನ್ನು ವೀಕ್ಷಿಸಿ...

ನಮ್ಮ ಜಯಕರ್ನಾಟಕ ಜನಪರ ವೇದಿಕೆಯ ಯೂಟ್ಯೂಬ್ ಚಾನೆಲ್ ಅನ್ನು ಸಬ್ಸ್ಕ್ರೈಬ್ ಮಾಡಿ, ಲೈಕ್ ಮಾಡಿ, ಫಾಲೋ ಮಾಡಿ, ಶೇರ್ ಮಾಡಿ...

ಇಂತಿ ನಿಮ್ಮ:
ಜಯಕರ್ನಾಟಕ
ಜನಪರ ವೇದಿಕೆ.

💛❤️ Karnataka Rajyotsava – Celebration of Kannada Pride! 💛❤️Celebrate the spirit, culture, and heritage of Karnataka!Under the leadership of our esteemed a...

ಬೆಂಗಳೂರಿನ ಮಹಾತ್ಮ ಗಾಂಧಿ ರಸ್ತೆಯಲ್ಲಿ 70ನೇ ಕನ್ನಡ ರಾಜ್ಯೋತ್ಸವ ಹಾಗೂ 5ನೇ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಿದ ಜಯಕರ್ನ...
06/11/2025

ಬೆಂಗಳೂರಿನ ಮಹಾತ್ಮ ಗಾಂಧಿ ರಸ್ತೆಯಲ್ಲಿ 70ನೇ ಕನ್ನಡ ರಾಜ್ಯೋತ್ಸವ ಹಾಗೂ 5ನೇ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಿದ ಜಯಕರ್ನಾಟಕ ಜನಪರ‌ ವೇದಿಕೆ.

ಆತ್ಮೀಯರೆ,

ನಮ್ಮೆಲ್ಲರ ಹೆಮ್ಮೆಯ ನಾಯಕರಾದ ಶ್ರೀ ಬಿ.ಗುಣರಂಜನ್ ಶೆಟ್ಟಿಯವರ ನೇತೃತ್ವದಲ್ಲಿ,

ಬೆಂಗಳೂರಿನ, ಎಂ.ಜಿ.ರಸ್ತೆಯ, ಬಾರ್ಟನ್ ಸೆಂಟರ್‌ನ ಅಂಗಳದಲ್ಲಿ, ಜಯಕರ್ನಾಟಕ ಜನಪರ ವೇದಿಕೆ ವತಿಯಿಂದ, ಐ ಕೇರ್ ಬ್ರಿಗೇಡ್, ಐ ಕೇರ್ ಫೌಂಡೇಷನ್ ಹಾಗೂ ಬಾರ್ಟನ್ ಸೆಂಟರ್ ಮಾಲೀಕರ ಸಂಘದ ಸಹಯೋಗದೊಂದಿಗೆ 70ನೇ ಕರ್ನಾಟಕ ರಾಜ್ಯೋತ್ಸವ ಹಾಗೂ ಜಯಕರ್ನಾಟಕ ಜನಪರ ವೇದಿಕೆಯ 5ನೇ ವಾರ್ಷಿಕೋತ್ಸವದ ಕಾರ್ಯಕ್ರಮವನ್ನು ತಾಯಿ ಭುವನೇಶ್ವರಿಗೆ ದೇವಿಗೆ ವಿಶೇಷ ಪೂಜೆಯನ್ನು ಸಲ್ಲಿಸಿ, ಕನ್ನಡ ಡಿಂಡಿಮ ಮೊಳಗಿಸಿ, ಕನ್ನಡ ಪತಾಕೆಯನ್ನು ಬಾನೆತ್ತರಕ್ಕೇರಿಸಿ, ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ವಿವಿಧ ಸಾಂಸ್ಕೃತಿಕ ಕಲಾ ತಂಡಗಳೊಂದಿಗೆ ಮಹಾತ್ಮ ಗಾಂಧಿ ರಸ್ತೆಯಲ್ಲಿ ಕನ್ನಡ ತೇರಿನ ಜೊತೆಗೆ ಅದ್ದೂರಿ ಮೆರವಣಿಗೆಯನ್ನು ನಡೆಸುವ ಮೂಲಕ ಬಹಳ ವಿಜೃಂಭಣೆಯಿಂದ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಾಂತಿನಗರ ಶಾಸಕರು ಹಾಗೂ ಬಿಡಿಎ ಅಧ್ಯಕ್ಷರಾದ ಎನ್.ಎ.ಹ್ಯಾರಿಸ್ ರವರು, ಉಪ ಪೋಲಿಸ್ ಆಯುಕ್ತರಾದ ರಾಮಚಂದ್ರಪ್ಪ ರವರು, ಮಾಜಿ ಮಹಾ ಪೌರರಾದ ಗೌತಮ್ ರವರು, ಕನ್ನಡಪರ ಹೋರಾಟಗಾರಾದ ರೂಪೇಶ್ ರಾಜಣ್ಣ, ಲೋಕಾಯುಕ್ತ ಪೊಲೀಸ್ ಇನ್ಸ್‌ಪೆಕ್ಟರ್ ರಾಜೇಶ್ ರವರು, ಕೀರ್ತಿ ಗಣೇಶ್ ರವರು ದೇವರಾಜ್ ಅರಸು ನಿಗಮ ಮಂಡಳಿ ಅಧ್ಯಕ್ಷರು ಹಾಗೂ NSUI ರಾಜ್ಯಾಧ್ಯಕ್ಷರು, ಕರ್ನಾಟಕ ರಾಜ್ಯ ರೈತ ಕಲ್ಯಾಣ ಮಹಿಳಾ ರಾಜ್ಯಾಧ್ಯಕ್ಷೆ ಉಷಾ ಜಯಶ್ರೀ, ಚಿನ್ನಪ್ಪ ಡಿಸಿ, ಕ್ರಿಕೆಟ್ ಕಂಟ್ರೋಲ್ ರೂಂ,
ನಿವೃತ್ತ ಅರಣ್ಯ ಉಪ ಸಂರಕ್ಷಣಾ ಅಧಿಕಾರಿ ಮಾಣಿಕ್, ಮೋಹನ್
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಂಘದ ಅಧ್ಯಕ್ಷರು,
ಡಾ.ಸತೀಶ್ ಕುಮಾರ್ ಮುಖ್ಯಾಧಿಕಾರಿ ಆರೋಗ್ಯ ಇಲಾಖೆ, ಮೂಲ ನಿವಾಸಿ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ಮುನಿಮಾರಪ್ಪ, ನೇವಿ ಕರ್ನಲ್ಸ್, ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಜಯಕರ್ನಾಟಕ ಜನಪರ ವೇದಿಕೆಯ ರಾಜ್ಯಾಧ್ಯಕ್ಷರಾದ ಜೆ.ಶ್ರೀನಿವಾಸ್, ರಾಜ್ಯ ಕಾರ್ಯಾಧ್ಯಕ್ಷ ಹೆಚ್. ರಾಮಚಂದ್ರಯ್ಯ, ಬೆಂಗಳೂರು ಜಿಲ್ಲಾ ಅಧ್ಯಕ್ಷ ಪಿ.ಲೋಕೇಶ್, ರಾಜ್ಯ ಮಹಾ ಪ್ರಧಾನ ಸಂಚಾಲಕ ಶೆ.ಭೊ.ರಾಧಾಕೃಷ್ಣ, ಖಜಾಂಚಿ ಉದಯ್ ಶೆಟ್ಟಿ, ಉಪಾಧ್ಯಕ್ಷರಾದ ಕೆ.ಎನ್.ಜಗದೀಶ್, ರಾಜ್ಯ ಮಹಿಳಾ ಘಟಕದ ಅಧ್ಯಕ್ಷರಾದ ಜಿ.ಎಸ್.ಪುಷ್ಪಲತಾ, ರಾಜ್ಯ ಸಂಘಟನಾ ಕಾರ್ಯದರ್ಶಿ ಗೋಪಿ, ಕಿರಣ್ ಕುಮಾರ್, ಬೆಂಗಳೂರು ಮಹಿಳಾ ಘಟಕದ ಅಧ್ಯಕ್ಷೆ ಸುನಂದಾ ರೆಡ್ಡಿ ಸೇರಿದಂತೆ ಬೆಂಗಳೂರು ಜಿಲ್ಲಾ, ವಿಧಾನಸಭಾ ಕ್ಷೇತ್ರ ಹಾಗೂ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸಾವಿರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಹೆಚ್ಚಿನ ಸಹಕಾರ ನೀಡಿದ ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರಿಗೆ, ಮಾಧ್ಯಮ ಸ್ನೇಹಿತರಿಗೆ ಹಾಗೂ ಹಗಳಿರುವ ಶ್ರಮಿಸಿದ ಜಯಕರ್ನಾಟಕ ಜನಪರ ವೇದಿಕೆಯ ಸಮಸ್ತ ಪದಾಧಿಕಾರಿಗಳಿಗೆ ಹಾಗೂ ಸ್ನೇಹಿತರಿಗೆ ಹೃದಯ ಪೂರ್ವಕ ಧನ್ಯವಾದಗಳು.

ಇಂತಿ ನಿಮ್ಮ:
ಜಯಕರ್ನಾಟಕ
ಜನಪರ ವೇದಿಕೆ.

ಅತ್ಮೀಯರೆ,ನಮ್ಮ ಜಯಕರ್ನಾಟಕ ಜನಪರ ವೇದಿಕೆಯ ಬಾಗಲಕೋಟೆ ಜಿಲ್ಲಾ ಘಟಕದ ವತಿಯಿಂದ,ಜಯಕರ್ನಾಟಕ ಜನಪರ ವೇದಿಕೆಯ 5ನೇ ವಾರ್ಷಿಕೋತ್ಸವ ಹಾಗೂ 70ನೇ ಕನ್ನ...
03/11/2025

ಅತ್ಮೀಯರೆ,

ನಮ್ಮ ಜಯಕರ್ನಾಟಕ ಜನಪರ ವೇದಿಕೆಯ ಬಾಗಲಕೋಟೆ ಜಿಲ್ಲಾ ಘಟಕದ ವತಿಯಿಂದ,

ಜಯಕರ್ನಾಟಕ ಜನಪರ ವೇದಿಕೆಯ 5ನೇ ವಾರ್ಷಿಕೋತ್ಸವ ಹಾಗೂ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಮುಧೋಳ ತಾಲ್ಲೂಕಿನ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ತಾಯಿ ಭುವನೇಶ್ವರಿ ದೇವಿಗೆ ಪೂಜೆಯನ್ನು ಸಲ್ಲಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಇದೇ ಸಂದರ್ಭದಲ್ಲಿ ಮುಧೋಳ ತಾಲ್ಲೂಕು ಆಡಳಿತ ವತಿಯಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ನಮ್ಮ ಜಯಕರ್ನಾಟಕ ಜನಪರ ವೇದಿಕೆಯ ಬಾಗಲಕೋಟೆ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರಾದ ಶ್ರೀಮತಿ ಶೋಭ ಬಂಡಿವಡ್ಡರ್ ಅವರ ಸಾಮಾಜಿಕ ಸೇವೆಯನ್ನು ಪರಿಗಣಿಸಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಿದರು.

ಬಾಗಲಕೋಟೆ ಜಿಲ್ಲಾ ಅಧ್ಯಕ್ಷರಾದ ಶ್ರೀ ಬಸವರಾಜ್ ಬಂಡಿ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರಾದ ಶೋಭ ಬಂಡಿವಡ್ಡರ್, ಸೇರಿದಂತೆ ಜಿಲ್ಲಾ ಹಾಗೂ ಮುಧೋಳ ತಾಲ್ಲೂಕಿನ ಪದಾಧಿಕಾರಿಗಳು ಸೇರಿದಂತೆ ಅನೇಕರು ಇದ್ದರು.

ಇಂತಿ ನಿಮ್ಮ:
ಜಯಕರ್ನಾಟಕ
ಜನಪರ ವೇದಿಕೆ.

ಅತ್ಮೀಯರೆ,ನಮ್ಮ ಜಯಕರ್ನಾಟಕ ಜನಪರ ವೇದಿಕೆಯ ಗದಗ ಜಿಲ್ಲಾ ಘಟಕದ ವತಿಯಿಂದ,ಜಯಕರ್ನಾಟಕ ಜನಪರ ವೇದಿಕೆಯ 5ನೇ ವಾರ್ಷಿಕೋತ್ಸವ ಹಾಗೂ 70ನೇ ಕನ್ನಡ ರಾಜ...
03/11/2025

ಅತ್ಮೀಯರೆ,

ನಮ್ಮ ಜಯಕರ್ನಾಟಕ ಜನಪರ ವೇದಿಕೆಯ ಗದಗ ಜಿಲ್ಲಾ ಘಟಕದ ವತಿಯಿಂದ,

ಜಯಕರ್ನಾಟಕ ಜನಪರ ವೇದಿಕೆಯ 5ನೇ ವಾರ್ಷಿಕೋತ್ಸವ ಹಾಗೂ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಬೆಳ್ಳಟ್ಟಿ ಗ್ರಾಮದಲ್ಲಿ ಧ್ವಜಾರೋಹಣ ನಡಸಿ, ತಾಯಿ ಭುವನೇಶ್ವರಿ ದೇವಿಗೆ ಪೂಜೆಯನ್ನು ಸಲ್ಲಿಸಿ, ಗಿಡ ನೆಡುವ ಮೂಲಕ ಪರಿಸರ ಜಾಗೃತಿ ಮೂಡಿಸುವುದೊಂದಿಗೆ ಅರ್ಥಪೂರ್ಣವಾಗಿ ಆಚರಿಸಲಾಯಿತು.

ರಾಜ್ಯ ಉಪಾಧ್ಯಕ್ಷರಾದ ಶ್ರೀ ಹಾಲಪ್ಪ ವರವಿ,ಗದಗ ಜಿಲ್ಲಾ ಅಧ್ಯಕ್ಷರಾದ ಸಣ್ಣಯಲ್ಲಪ್ಪ ವಲಗೇರಿ, ಉಪಾಧ್ಯಕ್ಷರಾದ ಕುಮಾರ್ ಬೆಟಗೇರಿ, ವೆಂಕಟೇಶ್ ಶಾಂತಗೇರಿ, ಮಾಲತೇಶ್ ರಗಟಿ, ಸಂತೋಷ್ ವಡ್ಡರ, ನಿಂಗರಾಜ ರಗಟಿ, ಗೋಪಾಲ್, ನಾಗೇಶ್, ಶಂಕರ್, ಕೊಟ್ರಯ್ಯ, ಪ್ರಶಾಂತ್, ಬಸವರಾಜ ಸೇರಿದಂತೆ ಅನೇಕರು ಇದ್ದರು.

ಇಂತಿ ನಿಮ್ಮ:
ಜಯಕರ್ನಾಟಕ
ಜನಪರ ವೇದಿಕೆ.

ಅತ್ಮೀಯರೆ,ನಮ್ಮ ಜಯಕರ್ನಾಟಕ ಜನಪರ ವೇದಿಕೆಯ ಉತ್ತರಕನ್ನಡ(ಕಾರವಾರ) ಜಿಲ್ಲಾ ಘಟಕದ ವತಿಯಿಂದ,ಜಯಕರ್ನಾಟಕ ಜನಪರ ವೇದಿಕೆಯ 5ನೇ ವಾರ್ಷಿಕೋತ್ಸವ ಹಾಗೂ...
03/11/2025

ಅತ್ಮೀಯರೆ,

ನಮ್ಮ ಜಯಕರ್ನಾಟಕ ಜನಪರ ವೇದಿಕೆಯ ಉತ್ತರಕನ್ನಡ(ಕಾರವಾರ) ಜಿಲ್ಲಾ ಘಟಕದ ವತಿಯಿಂದ,

ಜಯಕರ್ನಾಟಕ ಜನಪರ ವೇದಿಕೆಯ 5ನೇ ವಾರ್ಷಿಕೋತ್ಸವ ಹಾಗೂ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ನಗರ ಬಸ್ ನಿಲ್ದಾಣದ ಎದುರು ಧ್ವಜಾರೋಹಣ ನಡಸಿ, ತಾಯಿ ಭುವನೇಶ್ವರಿ ದೇವಿಗೆ ಪೂಜೆಯನ್ನು ಸಲ್ಲಿಸುವುದರ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಉತ್ತರಕನ್ನಡ(ಕಾರವಾರ) ಜಿಲ್ಲಾ ಅಧ್ಯಕ್ಷರಾದ ಶ್ರೀ ದಿಲೀಪ್ ಅರ್ಗೇಕರ್, ಕಾರ್ಯಾಧ್ಯಕ್ಷರಾದ ರೋಷನ್ ಹರಿಕಂತ್ರ, ಸುದೇಶ್ ನಾಯ್ಕ್, ರಾಹುಲ್, ಸುನಿಲ್, ರಾಜು, ಮೋಹನ್, ದಿಲೀಪ್, ಸಂದೇಶ್, ವಿನಾಯಕ್, ದೀಪಕ್, ವಿನಯ್ ಸೇರಿದಂತೆ ಅನೇಕರು ಇದ್ದರು.

ಇಂತಿ ನಿಮ್ಮ:
ಜಯಕರ್ನಾಟಕ
ಜನಪರ ವೇದಿಕೆ.

ಅತ್ಮೀಯರೆ,ನಮ್ಮ ಜಯಕರ್ನಾಟಕ ಜನಪರ ವೇದಿಕೆಯ ಚಿತ್ರದುರ್ಗ ಜಿಲ್ಲಾ ಘಟಕದ ವತಿಯಿಂದ,ಜಯಕರ್ನಾಟಕ ಜನಪರ ವೇದಿಕೆಯ 5ನೇ ವಾರ್ಷಿಕೋತ್ಸವ ಹಾಗೂ 70ನೇ ಕನ...
03/11/2025

ಅತ್ಮೀಯರೆ,

ನಮ್ಮ ಜಯಕರ್ನಾಟಕ ಜನಪರ ವೇದಿಕೆಯ ಚಿತ್ರದುರ್ಗ ಜಿಲ್ಲಾ ಘಟಕದ ವತಿಯಿಂದ,

ಜಯಕರ್ನಾಟಕ ಜನಪರ ವೇದಿಕೆಯ 5ನೇ ವಾರ್ಷಿಕೋತ್ಸವ ಹಾಗೂ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಧ್ವಜಾರೋಹಣ ನಡಸಿ, ತಾಯಿ ಭುವನೇಶ್ವರಿ ದೇವಿಗೆ ಪೂಜೆಯನ್ನು ಸಲ್ಲಿಸಿ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿ ಕೆಲವು ಸಾಧಕರನ್ನು ಗೌರವಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಚಿತ್ರದುರ್ಗ ಜಿಲ್ಲಾ ಅಧ್ಯಕ್ಷರಾದ ಶ್ರೀ ಬಿ.ಟಿ.ರಾಜೇಂದ್ರ, ಉಪಾಧ್ಯಕ್ಷರಾದ ಸಿದ್ದೇಶ್ವರ ಸತೀಶ್, ಪ್ರಧಾನ ಕಾರ್ಯದರ್ಶಿ ಅಭಿಲಾಷ್, ಪದಾಧಿಕಾರಿಗಳಾದ ಗಿರೀಶ್, ತಾಲ್ಲೂಕು ಅಧ್ಯಕ್ಷ ಅಶೋಕ್, ಪದಾಧಿಕಾರಿಗಳಾದ ನಿರಂಜನ್, ಹರೀಶ್, ಪ್ರವೀಣ್, ನಾಗರಾಜ್ ಸೇರಿದಂತೆ ಅನೇಕರು ಇದ್ದರು.

ಇಂತಿ ನಿಮ್ಮ:
ಜಯಕರ್ನಾಟಕ
ಜನಪರ ವೇದಿಕೆ.

ಅತ್ಮೀಯರೆ,ನಮ್ಮ ಜಯಕರ್ನಾಟಕ ಜನಪರ ವೇದಿಕೆಯ ಬೆಳಗಾವಿ ಜಿಲ್ಲಾ ಘಟಕದ ವತಿಯಿಂದ,ಜಯಕರ್ನಾಟಕ ಜನಪರ ವೇದಿಕೆಯ 5ನೇ ವಾರ್ಷಿಕೋತ್ಸವ ಹಾಗೂ 70ನೇ ಕನ್ನಡ...
03/11/2025

ಅತ್ಮೀಯರೆ,

ನಮ್ಮ ಜಯಕರ್ನಾಟಕ ಜನಪರ ವೇದಿಕೆಯ ಬೆಳಗಾವಿ ಜಿಲ್ಲಾ ಘಟಕದ ವತಿಯಿಂದ,

ಜಯಕರ್ನಾಟಕ ಜನಪರ ವೇದಿಕೆಯ 5ನೇ ವಾರ್ಷಿಕೋತ್ಸವ ಹಾಗೂ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಧ್ವಜಾರೋಹಣ ನಡಸಿ, ತಾಯಿ ಭುವನೇಶ್ವರಿ ದೇವಿಗೆ ಪೂಜೆಯನ್ನು ಸಲ್ಲಿಸುವುದರ ಮೂಲಕ ಬೆಳಗಾವಿಯಲ್ಲಿ ಎಂದಿನಂತೆ ಸಾಮೂಹಿಕವಾಗಿ ಕಾರ್ಯಕ್ರಮದಲ್ಲಿ ಭಾಗಿಯಾಗುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಬೆಳಗಾವಿ ಜಿಲ್ಲಾ ಅಧ್ಯಕ್ಷರಾದ ಶ್ರೀ ಶಿವರೆಡ್ಡಿ ಹುಚರೆಡ್ಡಿ, ಪದಾಧಿಕಾರಿಗಳಾದ ಶಿವಣ್ಣಗೌಡ ಪಾಟೀಲ್, ಜಂಗ್ಲಿಸಾಬ್, ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷರಾದ ರೇಣುಕಾ ಹಸ್ಣೇಕರ್ ಸೇರಿದಂತೆ ಜಿಲ್ಲಾ ಪದಾಧಿಕಾರಿಗಳು, ತಾಲ್ಲೂಕು ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಸೇರಿದಂತೆ ಅನೇಕರು ಇದ್ದರು.

ಇಂತಿ ನಿಮ್ಮ:
ಜಯಕರ್ನಾಟಕ
ಜನಪರ ವೇದಿಕೆ.

Address

JAYA KARNATAKA JANAPARA VEDIKE (Regd. ) #912, 9th Floor, Barton Center, M. G. Road
Bangalore
560001

Opening Hours

Monday 9:30am - 6pm
Tuesday 9:30am - 6pm
Wednesday 9:30am - 6pm
Thursday 9:30am - 6pm
Friday 9:30am - 6pm
Saturday 9:30am - 6pm

Alerts

Be the first to know and let us send you an email when Jaya Karnataka Janapara Vedike posts news and promotions. Your email address will not be used for any other purpose, and you can unsubscribe at any time.

Contact The Practice

Send a message to Jaya Karnataka Janapara Vedike:

Share

Share on Facebook Share on Twitter Share on LinkedIn
Share on Pinterest Share on Reddit Share via Email
Share on WhatsApp Share on Instagram Share on Telegram