SDM Multi Specialty Hospital Ujire

SDM Multi Specialty Hospital Ujire 50+ Specialists and Super Specialist Doctors, 200 Bedded Hospital

29/09/2025
ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್ ಭೇಟಿಪ್ರತಿಷ್ಟಿತ ಕೆನರಾ ಬ್ಯಾಂಕಿನ ಕೇಂದ್ರ ಕಛೇರಿಯ ಎಫ...
18/09/2025

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್ ಭೇಟಿ

ಪ್ರತಿಷ್ಟಿತ ಕೆನರಾ ಬ್ಯಾಂಕಿನ ಕೇಂದ್ರ ಕಛೇರಿಯ ಎಫ್.ಐ ವಿಂಗ್ ಜನರಲ್ ಮ್ಯಾನೇಜರ್ ಎಂ. ಭಾಸ್ಕರ ಚಕ್ರವರ್ತಿ ಇವÀರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಸೆ.13ರಂದು ಭೇಟಿ ನೀಡಿದರು. ಉಜಿರೆ ಎಸ್.ಡಿ.ಎಂ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್, ವೈದ್ಯಕೀಯ ಅಧೀಕ್ಷಕರಾದ ಡಾ. ದೇವೇಂದ್ರ ಕುಮಾರ್. ಪಿ ಹಾಗೂ ಮುಖ್ಯ ವೈದ್ಯಾಧಿಕಾರಿ ಡಾ| ಸಾತ್ವಿಕ್ ಜೈನ್ ಇವರು ಸ್ವಾಗತಿಸಿ ಬರಮಾಡಿಕೊಂಡರು.
ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು ಕಳೆದ ಬಾರಿ ತಾನು ಭೇಟಿ ನೀಡಿದಾಗ ಇದ್ದ ತಜ್ಞ ವೈದ್ಯರ ಸಂಖ್ಯೆ, ಸಿಬ್ಬಂದಿಗಳ ಸಂಖ್ಯೆ, ರೋಗಿಗಳ ಸಂಖ್ಯೆ ಈ ಬಾರಿ ಎಲ್ಲವೂ ಹೆಚ್ಚಾಗಿದೆ. ಆಸ್ಪತ್ರೆ ಮತ್ತು ಆಸ್ಪತ್ರೆಯ ಸೇವೆ ಕೂಡ ವಿಸ್ತಾರಗೊಳ್ಳುತ್ತಿದೆ. ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಮಿತದರದಲ್ಲಿ ಅತ್ಯಾಧುನಿಕ ವೈದ್ಯಕೀಯ ಸೇವೆ ನೀಡುತ್ತಿರುವ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ಸೇವೆಯನ್ನು ಶ್ಲಾಘಿಸಿದ ಅವರು ಕೇಂದ್ರ ಸರಕಾರದ ಹಲವಾರು ಉಳಿತಾಯ ಮತ್ತು ವಿಮಾ ಯೋಜನೆಗಳ ವಿವರ ನೀಡುತ್ತಾ, ಪ್ರತಿಯೊಬ್ಬರೂ ಈ ಯೋಜನೆಗಳ ಪ್ರಯೋಜನ ಪಡೆದುಕೊಳ್ಳುವ ಅಗತ್ಯವಿದೆ ಎಂದರು.
ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಅವರು ಮಾತನಾಡುತ್ತಾ, ಈ ಆಸ್ಪತ್ರೆಗೆ ಕೆನರಾ ಬ್ಯಾಂಕಿನಿಂದ ಕಳೆದ ವರ್ಷ ನೀಡಲ್ಪಟ್ಟ 10ಲಕ್ಷ ರೂಪಾಯಿಗಳ ವಿಶೇಷ ದೇಣಿಗೆಯನ್ನು ಸ್ಮರಿಸಿದರು. ಈ ಹಣದಲ್ಲಿ ಕಾರ್ಡಿಯಾಕ್ ಮೋನಿಟರ್ ಮತ್ತು ಸಿರಿಂಜ್ ಪಂಪು ಖರೀದಿಸಿದ್ದು, ಇದು ರೋಗಿಗಳ ತುರ್ತುಚಿಕಿತ್ಸೆಗೆ ಬಹಳ ಸಹಕಾರಿಯಾಗಿದೆ ಎಂದರು. ವೈದ್ಯಕೀಯ ಸೇವೆಗಳನ್ನು ವಿವರಿಸಿದ ಅವರು ಇಲ್ಲಿ ನುರಿತ ತಜ್ಞ ವೈದ್ಯರ ತಂಡವಿದ್ದು, ಹಲವಾರು ಕ್ಲಿಷ್ಟಕರ ಶಸ್ತ್ರಚಿಕಿತ್ಸೆಗಳನ್ನು ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ನಿರ್ದೇಶನದಂತೆ ಮಿತದರದಲ್ಲಿ ನಡೆಸಲಾಗುತ್ತಿದೆ. ಮೊಣಕಾಲು, ಸೊಂಟದಕೀಲುಗಳ ಬದಲಿ ಶಸ್ತ್ರಚಿಕಿತ್ಸೆಗಳಂತಹ ದುಬಾರಿ ಶಸ್ತ್ರಚಿಕಿತ್ಸೆಗಳನ್ನು ಇಲ್ಲಿ ಜನಸಾಮಾನ್ಯರಿಗೆ ಕೈಗೆಟಕುವ ದರದಲ್ಲಿ ಮಾಡಲಾಗುತ್ತಿದೆ. ಶೀಘ್ರದಲ್ಲಿ ಎಂ.ಆರ್.ಐ ಸೇವೆ ಕೂಡ ದೊರೆಯಲಿದೆ ಎಂದರು.
ವೈದ್ಯಕೀಯ ಅಧೀಕ್ಷಕರಾದ ಡಾ. ದೇವೇಂದ್ರ ಕುಮಾರ್. ಪಿ ಮತ್ತು ಎಲ್ಲಾ ವಿಭಾಗದ ಮುಖ್ಯಸ್ಥರು ಉಪಸ್ಥಿತರಿದ್ದರು.

ದಕ್ಷಿಣ ಭಾರತೀಯ ರಾಜ್ಯಗಳ ಮೂಳೆಚಿಕಿತ್ಸಾ ಸಂಘದ ವಾರ್ಷಿಕ ಸಮ್ಮೇಳನದಲ್ಲಿ ಉಜಿರೆ ಎಸ್.ಡಿ.ಎಂ ಆಸ್ಪತ್ರೆಯ ಮೂಳೆಚಿಕಿತ್ಸಾ ತಜ್ಞರಿಂದ ಉಪನ್ಯಾಸಉಜಿರ...
18/09/2025

ದಕ್ಷಿಣ ಭಾರತೀಯ ರಾಜ್ಯಗಳ ಮೂಳೆಚಿಕಿತ್ಸಾ ಸಂಘದ ವಾರ್ಷಿಕ ಸಮ್ಮೇಳನದಲ್ಲಿ ಉಜಿರೆ ಎಸ್.ಡಿ.ಎಂ ಆಸ್ಪತ್ರೆಯ ಮೂಳೆಚಿಕಿತ್ಸಾ ತಜ್ಞರಿಂದ ಉಪನ್ಯಾಸ

ಉಜಿರೆ ಎಸ್,ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಮೂಳೆಚಿಕಿತ್ಸಾ ತಜ್ಞರಾದ ಡಾ| ಪ್ರತೀಕ್ಷ್ ಪಿ. ಇವರು ಪುದುಚೇರಿಯ ಮಹಾತ್ಮ ಗಾಂಧಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಆ.29ರಿಂದ 31 ರವರೆಗೆ ನಡೆದ ದಕ್ಷಿಣ ಭಾರತೀಯ ರಾಜ್ಯಗಳ ಮೂಳೆಚಿಕಿತ್ಸಾ ಸಂಘದ 24ನೇ ವಾರ್ಷಿಕ ಸಮ್ಮೇಳನ ಓಯಸಿಸ್ಕಾನ್-2025 ಇದರಲ್ಲಿ ಪಾದದ ಮೂಳೆಗಳ ಮುರಿತದ ಗಾಯಗಳ ಅತ್ಯಾಧುನಿಕ ಚಿಕಿತ್ಸೆಗಳ ಕುರಿತು ಪ್ರಮುಖ ಉಪನ್ಯಾಸ ನೀಡಿದರು.
ದಕ್ಷಿಣ ಭಾರತದ ರಾಜ್ಯಗಳ ಹೆಸರಾಂತ ಪ್ರಮುಖ ಮೂಳೆಚಿಕಿತ್ಸಾ ತಜ್ಞರ ಕೂಡುವಿಕೆಯಲ್ಲಿ ನಡೆಯುವ ಈ ಸಮ್ಮೇಳನದಲ್ಲಿ ಮೂಳೆಚಿಕಿತ್ಸೆಯಲ್ಲಿ ಉಂಟಾಗುವ ತೊಡಕುಗಳು ಮತ್ತು ಅದರ ನಿವಾರಣೆಯ ಕುರಿತು ತಜ್ಞ ವೈದ್ಯರುಗಳು ಉಪನ್ಯಾಸ ನೀಡುತ್ತಾರೆ. ಈ ಸಮ್ಮೇಳನದಲ್ಲಿ ಉಜಿರೆ ಎಸ್,ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಮೂಳೆಚಿಕಿತ್ಸಾ ತಜ್ಞರಾಗಿರುವ, ಫೂಟ್ ಅಂಡ್ ಆಂಕ್ಲ್ ಶಸ್ತ್ರಚಿಕಿತ್ಸೆಯಲ್ಲಿ ಫೆಲೋಶಿಪ್ ಪಡೆದಿರುವ ಪಾದ ಮತ್ತು ಪಾದದ ಮಣಿಗಂಟು ಶಸ್ತ್ರಚಿಕಿತ್ಸೆಯಲ್ಲಿ ಪರಿಣತಿ ಹೊಂದಿರುವ, ಡಾ ಪ್ರತೀಕ್ಷ್. ಪಿ ಇವರು ಉಪನ್ಯಾಸ ನೀಡಿದರು.
ಇವರು ಈಗಾಗಲೇ ಉಜಿರೆ ಎಸ್,ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವಕ್ರಪಾದ ಹೊಂದಿರುವ, ನಡೆದಾಡಲು ಕಷ್ಟಪಡುತ್ತಿದ್ದ ಮಗುವಿಗೆ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಿ ಮಗು ಸ್ವತಂತ್ರವಾಗಿ ನಡೆದಾಡುವಂತೆ ಮಾಡುವ ಮೂಲಕ ಮಗುವಿನ ಪೋಷಕರಲ್ಲಿ ಸಂತೋಷ ತುಂಬಿದ ಇವರು ಡಾ| ಡಿ. ವೀರೇಂದ್ರ ಹೆಗ್ಗಡೆ, ಮಾತೃಶ್ರೀ ಹೇಮಾವತಿ ಹೆಗ್ಗಡೆ ಹಾಗೂ ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಇವರ ಮೆಚ್ಚುಗೆ ಪಾತ್ರರಾಗಿದ್ದರು ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ತಿಳಿಸಿದರು.
ಡಾ ಪ್ರತೀಕ್ಷ್. ಪಿ ಇವರು ಈ ಸಮ್ಮೇಳನದಲ್ಲಿ ಪಾದದ ಮೂಳೆಗಳ ಮುರಿತದ ಗಾಯಗಳ ಅತ್ಯಾಧುನಿಕ ಚಿಕಿತ್ಸೆಗಳ ಕುರಿತು ಪ್ರಮುಖ ಉಪನ್ಯಾಸ ನೀಡಲು ಸಂಘದಿಂದ ಆಹ್ವಾನಿಸಲ್ಪಟ್ಟಿದ್ದರು. ಪಾದದ ಮಧ್ಯದಲ್ಲಿರುವ ಅನೇಕ ಕೀಲುಗಳ ಮತ್ತು ಮೂಳೆಗಳ ಮುರಿತದಿಂದ ಅಥವಾ ಮಧ್ಯದ ಪಾದವನ್ನು ಬೆಂಬಲಿಸುವ ಅಸ್ಥಿರಜ್ಜುಗಳು ಹರಿದು ಗಾಯ ಉಂಟಾಗುವುದು. ಮುಂದೆ ಇದೇ ಗಾಯಗಳು ಸಂಕೀರ್ಣ ಸಮಸ್ಯೆಯಾಗಿ ಬದಲಾಗುವುದು ಮತ್ತು ಇವುಗಳಿಗೆ ಇರುವ ಅತ್ಯಾಧುನಿಕ ಚಿಕಿತ್ಸಾ ಪದ್ಧತಿಗಳ ಬಗ್ಗೆ ಇವರು ಈ ಸಮ್ಮೇಳನದಲ್ಲಿ ಪ್ರಮುಖ ಮಹತ್ವದ ನೀಡಿದರು.

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಫಿಸಿಯೋಥೆರಪಿ ಶಿಬಿರಪೂಜ್ಯ ಹೆಗ್ಗಡೆಯವರ ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರ ಆದೇ...
09/09/2025

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಫಿಸಿಯೋಥೆರಪಿ ಶಿಬಿರ

ಪೂಜ್ಯ ಹೆಗ್ಗಡೆಯವರ ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರ ಆದೇಶದಂತೆ, ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಇವರ ಮಾರ್ಗದರ್ಶನದಲ್ಲಿ ಫಿಸಿಯೋಥೆರಪಿ ದಿನದ ಪ್ರಯುಕ್ತ ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಫಿಸಿಯೋಥೆರಪಿ ಶಿಬಿರವನ್ನು ನಡೆಸಲಾಯಿತು.
ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ ಜನಾರ್ದನ್ ಶಿಬಿರ ಉದ್ಘಾಟಿಸಿ ಮಾತನಾಡುತ್ತಾ, ಫಿಸಿಯೋಥೆರಪಿಯಲ್ಲಿ ಹಲವಾರು ಆರೋಗ್ಯ ಸಮಸ್ಯೆಗಳಿಗೆ ಅದರದ್ದೇ ಆದ ಚಿಕಿತ್ಸಾ ವಿಧಾನಗಳಿವೆ. ನಮ್ಮ ಆಸ್ಪತ್ರೆಯಲ್ಲಿ ರೋಗಿಗಳ ಆರೋಗ್ಯ ಸಮಸ್ಯೆಗಳಿಗೆ ತಕ್ಕಂತೆ ಅತ್ಯಾಧುನಿಕ ವೈದ್ಯಕೀಯ ಉಪಕರಣಗಳನ್ನು ಅಳವಡಿಸಲಾಗಿದೆ. ಇಬ್ಬರು ಫಿಸಿಯೋಥೆರಪಿ ತಜ್ಞರು ಫಿಸಿಯೋಥೆರಪಿ ಸೇವೆ ನೀಡುತ್ತಿದ್ದು, ವಿಶ್ವ ಫಿಸಿಯೋಥೆರಪಿ ದಿನದ ಪ್ರಯುಕ್ತ ಈ ದಿನ ರಿಯಾಯಿತಿ ದರದಲ್ಲಿ ಚಿಕಿತ್ಸಾ ಸೌಲಭ್ಯ ನೀಡಲಾಗುತ್ತಿದೆ ಎಂದರು.
ಶಿಬಿರದಲ್ಲಿ ನರ ಮತ್ತು ಮೂಳೆಗಳಿಗೆ ಸಂಬಂಧಿಸಿದ ಕಾಯಿಲೆಗಳಿಗೆ, ಮಕ್ಕಳಲ್ಲಿ ಕಂಡುಬರುವ ದೈಹಿಕ ತೊಂದರೆಗಳಿಗೆ, ಶಸ್ತ್ರಚಿಕಿತ್ಸೆಯ ಬಳಿಕದ ಫಿಸಿಯೋಥೆರಪಿ ಮತ್ತು ನೋವು ನಿವಾರಣೆಗಳಿಗೆ ಮಾಡಬೇಕಾದ ಫಿಸಿಯೋಥೆರಪಿಗಳನ್ನು ಉಚಿತವಾಗಿ ಮಾಡಲಾಯಿತು.
ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಫಿಸಿಯೋಥೆರಪಿಸ್ಟ್ ತಜ್ಞರಾದ ಸನ್ನಿಧಿ ಜೈನ್ ಮತ್ತು ಪ್ರೀಥಮ್ ಈ ಶಿಬಿರವನ್ನು ನಡೆಸಿಕೊಟ್ಟರು. ಫಿಸಿಯೋಥೆರಪಿ ಸಮಾಲೋಚನೆಯನ್ನು ಉಚಿತವಾಗಿ ಮಾಡಲಾಯಿತು. ಫಿಸಿಯೋಥೆರಪಿ ವಿಧಾನಗಳಿಗೆ 20% ರಿಯಾಯತಿ ನೀಡಲಾಯಿತು.

20/08/2025
ಉಜಿರೆ ಎಸ್ ಡಿ ಎಂ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆಯಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.ವೈದ್ಯಕೀಯ ಅಧೀಕ್ಷಕ ಡಾ| ದೇವೇಂದ್ರ ...
16/08/2025

ಉಜಿರೆ ಎಸ್ ಡಿ ಎಂ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆಯಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ವೈದ್ಯಕೀಯ ಅಧೀಕ್ಷಕ ಡಾ| ದೇವೇಂದ್ರ ಕುಮಾರ್.ಪಿ ಧ್ವಜಾರೋಹಣ ನೆರವೇರಿಸಿದರು. ವೈದ್ಯರು ದಾದಿಯರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Address

SDM Multi-Speciality Hospital, Charmadi Road, NH234 Ujire
Ujire
574240

Alerts

Be the first to know and let us send you an email when SDM Multi Specialty Hospital Ujire posts news and promotions. Your email address will not be used for any other purpose, and you can unsubscribe at any time.

Contact The Practice

Send a message to SDM Multi Specialty Hospital Ujire:

Share

Share on Facebook Share on Twitter Share on LinkedIn
Share on Pinterest Share on Reddit Share via Email
Share on WhatsApp Share on Instagram Share on Telegram

Category